ಬ್ರೇಕಿಂಗ್ ನ್ಯೂಸ್: ಮಹಾದೇವ ಭೈರಗೊಂಡ ಮೇಲೆ ಫೈರಿಂಗ್

474

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಭೀಮಾತೀರದ ಹಂತಕ ಮಹಾದೇವ ಭೈರಗೊಂಡ ಮೇಲೆ ಅಪರಿಚಿತರು ಗುಂಡಿನ ದಾಳಿಗೈದಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕೇರಿ ತಾಂಡಾ ಬಳಿ ಈ ಘಟನೆ ನಡೆದಿದೆ.

ದುಷ್ಕರ್ಮಿಗಳು ಮಹಾದೇವ ಅವರ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಎರಡರಿಂದ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ತೀವ್ರ ಗಾಯಗೊಂಡ ಇವರನ್ನ ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!