ರೌಡಿ ಶೀಟರ್ ಗೆ ಗುಂಡೇಟು

261

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾನುವಾರ ಗುಂಡಿನ ಸದ್ದು ಕೇಳಿಸಿದೆ. ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ರೌಡಿ ಶೀಟರ್ ದಿನೇಶ ಅಲಿಯಾಸ್ ಕ್ರೇಜಿ ಕ್ರೂಸ್ ಕಾಲಿಗೆ ಗುಂಡೇಟು ಹೊಡೆಯಲಾಗಿದೆ. ಅಶೋಕ ನಗರ ಠಾಣೆ ಇನ್ಸ್ ಪೆಕ್ಟರ್ ಭರತ ಫೈರಿಂಗ್ ಮಾಡಿದ್ದಾರೆ.

ಮಾರ್ಚ್ 23ರಂದು ರವಿವರ್ಮಾ ಅಲಿಯಾಸ್ ಅಪ್ಪು ಕೊಲೆಯಾಗಿದೆ. ಮಾರ್ಚ್ 24ರಂದು ಆರು ಜನ ಆರೋಪಿಗಳನ್ನ ಬಂಧಿಸಲಾಗಿತ್ತು. ಇದರ ಪ್ರಮುಖ ಆರೋಪಿ ದಿನೇಶನ್ನ ಘಟನಾ ಸ್ಥಳಕ್ಕೆ ಕರೆದುಕೊಂಡು ಹೋದಾಗ, ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳಿಂದ ಪೇದೆ ವಸಂತ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ನೋಡಿದ್ದಾನೆ.

ಪೊಲೀಸರ ಮೇಲೆ ಹಲ್ಲೆ ಮಾಡಿದ ರೌಡಿ ಶೀಟರ್ ದಿನೇಶ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಗಾಯಗೊಂಡ ಪೇದೆ ಹಾಗೂ ಆರೋಪಿ ದಿನೇಶನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!