ಭಾನುವಾರ ಬೆಂಗಳೂರಲ್ಲಿ ಬಂದೂಕು ಸದ್ದು

338

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್ ನಡೆದಿದೆ. ಇಬ್ಬರು ಸುಪಾರಿ ಕಿಲ್ಲರ್ಸ್ ಮೇಲೆ ಫೈರಿಂಗ್ ನಡೆಸಲಾಗಿದೆ. ನಗರದ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಭರತ ಹಾಗೂ ಅರುಣ ಅನ್ನೋ ಇಬ್ಬರು ಸುಪಾರಿ ಕಿಲ್ಲರ್ಸ್ ಮೇಲೆ ಫೈರಿಂಗ್ ಆಗಿದೆ.

ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ರಾಜಶೇಖರ ಎಂಬುವರ ಹತ್ಯೆಗೆ ಸುಪಾರಿ ಪಡೆದಿದ್ರು. ಹೀಗಾಗಿ ಇದೆ ತಿಂಗಳು 23ರಂದು ಹೆಸರಘಟ್ಟದ ಬಳಿ ಟೀಂ ರೆಡಿಮಾಡಿಕೊಂಡು ದಾಳಿ ನಡೆಸಿದ್ರು. ಹೀಗಾಗಿ ಆರೋಪಿಗಳ ಬಂಧನಕ್ಕೆ ಸೋಲದೇವನಹಳ್ಳಿ ಪೊಲೀಸ್ರು ಮುಂದಾಗಿದ್ರು.

ಇಂದು ಆರೋಪಿಗಳ ಬಂಧನಕ್ಕೆ ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ನೋಡಿದ್ದಾರೆ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದ್ರೂ ಕೇಳಿಲ್ಲ. ಇದ್ರಿಂದಾಗಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ರಾಜಶೇಖರ ಎಂಬುವರ ಹತ್ಯೆಗೆ 10 ಲಕ್ಷ ರೂಪಾಯಿ ಸುಪಾರಿ ಪಡೆದಿದ್ರು ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!