ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು ಮೂರು ದಿನಗಳು ಬಾಕಿ ಉಳಿದಿವೆ. ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರು. ಆದರೆ, ಇದುವರೆಗೂ ಬಿಜೆಪಿ ತನ್ನ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಿಲ್ಲ. ದೆಹಲಿಯಲ್ಲಿ ಸಭೆಯ ಮೇಲೆ ಸಭೆ ನಡೆಸಲಾಗುತ್ತಿದ್ದರೂ, ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಆಗುತ್ತಿಲ್ಲ.
ಇಂದು ಮಧ್ಯಾಹ್ನ 1.30ಕ್ಕೆ ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆಯೊಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ, ಅಂತಿಮ ಸಭೆ ಮುಗಿದ ಬಳಿಕ ಸಂಜೆಯೊಳಗೆ ಮೊದಲ ಪಟ್ಟಿ ಬಿಡುಗಡೆಯಾಗುವ ವಿಶ್ವಾಸವಿದೆ ಎಂದಿದ್ದಾರೆ.
ಮೊದಲ ಹಂತದಲ್ಲಿ 170 ರಿಂದ 180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆಯಂತೆ. ಈ ಬಾರಿ ಹಲವು ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಇನ್ನು ತಂದೆ, ಮಕ್ಕಳಿಗೆ ಟಿಕೆಟ್ ಘೋಷಣೆಯಾದರೆ ಟಿಕೆಟ್ ವಂಚಿತರು ಯಾವ ರೀತಿಯಾಗಿ ಬಂಡಾಯ ಏಳುತ್ತಾರೆ ಅನ್ನೋ ಆತಂಕವಿದೆ. ಮೊದಲ ಪಟ್ಟಿಯಲ್ಲಿ ಯಾರೆಲ್ಲ ಹೆಸರು ಇರಲಿದೆ ಅನ್ನೋ ಕುತೂಹಲಕ್ಕೆ ಇಂದೆ ತೆರೆ ಬೀಳುತ್ತಾ ಕಾದು ನೋಡಬೇಕಿದೆ.