ಪ್ರಜಾಸ್ತ್ರ ಸುದ್ದಿ
ಬಳ್ಳಾರಿ: ಬಿಜೆಪಿಯಿಂದ ದೂರ ಸರೆದಿರುವ ಮಾಜಿ ಸಚಿವ ಜನಾರ್ದನ್ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನ ಬೆನ್ನಲ್ಲೇ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ಬಳ್ಳಾರಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದಮ್ಮೂರು ಶೇಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿಯನ್ನು ಅಧಿಕಾರ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜನಾರ್ದನ್ ರೆಡ್ಡಿ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿ ಸರಿಯಿಲ್ಲ. ಇದೆ ಕಾರಣಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ದಮ್ಮೂರು ಶೇಖರ್, ಜನಾರ್ದನ್ ರೆಡ್ಡಿ ಕಟ್ಟಾ ಬೆಂಬಲಿಗ. ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವವರು. ಬುಡಾ ಅಧ್ಯಕ್ಷರಾಗಿದ್ದವರು. ಈಗ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ಗಾಲಿ ಜನಾರ್ದನ್ ರೆಡ್ಡಿ ಕಮಲ ನಾಯಕರಿಗೆ ಶಾಕ್ ನೀಡಲು ಶುರು ಮಾಡಿದ್ದಾರೆ.