ಅಲ್ಲಿ ‘ಫಿಟ್ ಇಂಡಿಯಾ’.. ಇಲ್ಲಿ ‘ಕೈ’ ಧರಣಿ..

362

ಬೆಂಗಳೂರು/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10 ಗಂಟೆಗೆ ‘ಫಿಟ್ ಇಂಡಿಯಾ ಚಳವಳಿ’ಗೆ ಚಾಲನೆ ನೀಡಲಿದ್ದಾರೆ. ಆಗಸ್ಟ್ 29 ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಪ್ರಧಾನಿ ಮೋದಿ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡ್ತಿದ್ದಾರೆ. ಇತ್ತ ರಾಜ್ಯ ರಾಜಧಾನಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಧರಣಿಗೆ ಮುಂದಾಗಿದೆ.

ಕರ್ನಾಟಕದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಮತ್ತು ರಾಜ್ಯಕ್ಕೆ ಶೀಘ್ರವಾಗಿ ಪರಿಹಾರ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಾಳುತ್ತಿದೆ ಎಂದು, ಕಾಂಗ್ರೆಸ್ ಇಡೀ ದಿನ ಧರಣಿಗೆ ಮುಂದಾಗಿದೆ. ಕೇಂದ್ರದ ಮೇಲೆ ಒತ್ತಡ ಹೇರುವ ಬದ್ಲು, ಸಿಎಂ ಯಡಿಯೂರಪ್ಪನವರು ಬೆಂಗಳೂರು ಟು ದೆಹಲಿ ಓಡಾಟ ನಡೆಸ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಬೆಂಗಳೂರಿನ ಆನಂದರಾವ ಸರ್ಕಲ್ ಬಳಿಯಿರುವ ಗಾಂಧಿ ಪ್ರತಿಮೆ ಎದುರು ಧರಣಿ ಸತ್ಯಾಗ್ರಹವನ್ನ ಇಂದು ಬೆಳಗ್ಗೆ 10 ಗಂಟೆಗೆ ನಡೆಸಲು ಮುಂದಾಗಿದೆ.




Leave a Reply

Your email address will not be published. Required fields are marked *

error: Content is protected !!