ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದಟ್ಟ ಮಂಜು ಆವರಿಸಿದ್ದರಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿದ್ದ ವಿಮಾನ ಲ್ಯಾಂಡಿಂಗ್ ಆಗಲು ಸಮಸ್ಯೆ ಉಂಟಾಗಿದೆ. ಇದರಿಂದಾಗಿ ಸುಮಾರು ಅರ್ಧ ಗಂಟೆಗಳ ಕಾಲ ಆಕಾಶದಲ್ಲೇ ಹಾರಾಟ ನಡೆಸಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಕೇಂದ್ರ ಸಚಿವರು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಹುಬ್ಬಳ್ಳಿಗೆ 7.30ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ, ದಟ್ಟು ಮಂಜು ಆವರಿಸಿದ್ದರಿಂದ ಲ್ಯಾಂಡಿಂಗ್ ಕ್ಲಿಯರೆನ್ಸ್ ಸಿಕ್ಕಿಲ್ಲ. ಹೀಗಾಗಿ ಮಂಗಳೂರು ಏರ್ ಪೋರ್ಟ್ ಗೆ ಡೈವರ್ಟ್ ಮಾಡುವ ಚಿಂತನೆ ನಡೆದಿತ್ತು.
ಕೆಲ ಕಾಲ ಆತಂಕ ಮೂಡಿಸಿದ್ದ ಸಮಸ್ಯೆಯಿಂದ ಕೊನೆಗೂ ಹುಬ್ಬಳ್ಳಿ ಏರ್ ಟ್ರಾಫಿಕ್ ಕಂಟ್ರೋಲ್ ನಿಂದ ಲ್ಯಾಂಡಿಂಗ್ ಕ್ಲಿಯರೆನ್ಸ್ ಸಿಕ್ಕಿದೆ. ಆಗ ಸುರಕ್ಷಿತವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಆಗಿದೆ.