ಪ್ರಜಾಸ್ತ್ರ ಸುದ್ದಿ
ಬೆಳಗವಿ: ನೆರೆ ಹಾವಳಿಯಿಂದ ಹಾಳಾದ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಲು ಬಂದ ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಪ್ರತಿಭಟನೆ ಬಿಸಿ ತಟ್ಟಿದೆ. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂಗೆ ರೈತರಿಂದ ಪ್ರತಿಭಟನೆಯ ಸ್ವಾಗತ ಸಿಕ್ಕಿದೆ.
ಭಾರೀ ಮಳೆಯಿಂದಾಗಿ ಹಾಳದ ಉತ್ತರ ಕರ್ನಾಟಕ ಭಾಗದ ಪ್ರದೇಶಗಳ ಸಮೀಕ್ಷೆಗಾಗಿ ಸಿಎಂ ಆಗಮಿಸಿದ್ದಾರೆ. ಸಿಎಂ ಬರುವುದನ್ನ ತಿಳಿದುಕೊಂಡಿದ್ದ ರೈತ ಸಂಘಟನೆ ಮುಖಂಡರು, ವಿಮಾನ ನಿಲ್ದಾಣದ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ರು.
ನೆರೆಯಿಂದಾಗಿ ಜಿಲ್ಲೆಯಲ್ಲಿ ಆಗಿರುವ ಹಾನಿಗೆ ಸೂಕ್ತವಾದ ಪರಿಹಾರ ನೀಡಬೇಕು. ಇದರ ಜೊತೆಗೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನ ವಾಪಸ್ ಪಡೆಯಬೇಕೆಂದು ಪ್ರತಿಭಟನೆ ನಡೆಸಿದ್ರು.