ದಶಕದ ಬಳಿಕ ಬಾಗಲಕೋಟೆಯಲ್ಲಿ ಪ್ರವಾಹ

432

ಬಾಗಲಕೋಟೆ: ಬೆಳಗಾವಿ ರೀತಿಯಲ್ಲಿಯೇ ಇದೀಗ ಬಾಗಲಕೋಟೆಯಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಿಲ್ಲೆಯ 6 ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ. ಇದ್ರಿಂದಾಗಿ ಮುಧೋಳ, ಜಮಖಂಡಿ ತಾಲೂಕಿನ 50 ಗ್ರಾಮಗಳ ಜನಜೀವನ ಅಸ್ತವ್ಯಸ್ಥವಾಗಿದೆ.

ಇಂದು ಸಿಎಂ ಬಾಗಲಕೋಟೆಗೆ ಭೇಟಿ ನೀಡಲಿದ್ದಾರೆ. ಆದ್ರೆ, ರಸ್ತೆಗಳು ಸಂಪೂರ್ಣ ಬಂದ್ ಆಗಿರೋದ್ರಿಂದ ವೈಮಾನಿಕ ಸಮೀಕ್ಷೆ ನಡೆಸುವ ಸಾಧ್ಯತೆಯಿದೆ. ಕೃಷ್ಣ, ಮಲಪ್ರಭಾ ಹಾಗೂ ಘಟಪ್ರಭಾ ಈ ಮೂರು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಜಿಲ್ಲೆಯಲ್ಲಿ ಇದೀಗ ಪ್ರವಾಹ ಎಲ್ಲೆಡೆ ಆವರಿಸಿಕೊಳ್ಳುತ್ತಿದೆ.




Leave a Reply

Your email address will not be published. Required fields are marked *

error: Content is protected !!