ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ಅವರು ಭಾನುವಾರ ಮುಂಜಾನೆ ನಿಧನರಾಗಿದ್ದಾರೆ. ಈ ಕುರಿತು ಅವರ ಪತ್ನಿ ಆಶಾ ರಘು ಅವರು ಸೋಷಿಯಲ್ ಮೀಡಿಯಾ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಘು ಅವರು ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸೇರಿದಂತೆ ಅಪಾರ ಬಂಧು, ಮಿತ್ರರು ಸಂತಾಪ ಸೂಚಿಸಿದ್ದಾರೆ. ಹಲವು ಪತ್ರಿಕೆಗಳಲ್ಲಿ ಆಹಾರದ ಕುರಿತು ಅಂಕಣಗಳನ್ನು ಬರೆಯುತ್ತಿದ್ದರು. ನವಜಾತ ಶಿಶುಗಳಲ್ಲಿ ಕಂಡು ಬರುವ ಮಾರಕ ರೋಗಗಳಿಗೆ ಪೌಷ್ಟಿಕಾಂಶದ ಆಹಾರವನ್ನು ಸಂಶೋಧನೆ ಮೂಲಕ ಕಂಡು ಹಿಡಿದಿದ್ದರು.
ಹಲವು ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು. ಆಹಾರಕ್ಕೆ ಸಂಬಂಧಿಸಿದಂತೆ ಹಲವಾರು ಕೃತಿಗಳನ್ನು ಸಹ ರಚಿಸಿದ್ದಾರೆ.