ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪಟ್ಟಣದ ಎಂ.ಸಿ ಮನಗೂಳಿ ಅಭಿಮಾನಿ ಬಳಗ ಹಾಗೂ ಕರ್ನಾಟಕ ಅಂಗವಿಕಲರ ಐಕ್ಯತಾ ವೇದಿಕೆ, ಆರ್.ಪಿ.ಡಿ ಟಾಸ್ಕ್ ಪೋರ್ಸ್ ಸಹಯೋಗದಲ್ಲಿ ಆಹಾರದ ಕಿಟ್ ವಿತರಣೆ ಮಾಡಲಾಗಿದೆ. ಸಂಕಷ್ಟದಲ್ಲಿರುವ 50ಕ್ಕೂ ಹೆಚ್ಚು ಅಂಗವಿಕಲರಿಗೆ ಆಹಾರದ ಕಿಟ್ ನೀಡಲಾಗಿದೆ.
ಈ ವೇಳೆ ಮಾತ್ನಾಡಿದ ಕರ್ನಾಟಕ ಅಂಗವಿಕಲರ ಐಕ್ಯತಾ ವೇದಿಕೆ ರಾಜ್ಯಾಧ್ಯಕ್ಷೆ ಸಬೀಯಾ ಬೇಗಂ, ಕರೋನಾ 2ನೇ ಅಲೆಯಲ್ಲಿ ತತ್ತರಿಸಿ ಹೋಗಿರುವ ಪರಿಸ್ಥಿತಿಯಲ್ಲಿ ಅಂಗವಿಕಲರಿಗೆ ಡಾ.ಚನ್ನವೀರ ಮನಗೂಳಿ ಅವರು ಸ್ಪಂದಿಸಿದ್ದಾರೆ. ಸಮಾಜದ ಮುಖ್ಯವಾಹಿನಿಗೆ ಬರದೆ ಇರುವವರಿಗೆ ಆಹಾರದ ಕಿಟ್ ನೀಡಿದ್ದಾರೆ ಎಂದರು.
ಇದೆ ಸಂದರ್ಭದಲ್ಲಿ ದಾವಲಸಾಬ ಮರ್ತೂರ, ವಿಜಯ ಭಜಂತ್ರಿ, ರಾಜು ಯಡ್ರಾಮಿ, ಹೇಮಾ ಕಾಸರ್, ಸಲೀಂ ಮಂದೇವಾಲಿ, ಪುಂಡಲಿಕ, ಲಕ್ಷ್ಮೀ ರಾಠೋಡ, ಸುರೇಖಾ ಗುರುವ, ಯಲ್ಲಮ್ಮ, ಮಲ್ಲಮ್ಮ, ಗಣೇಶ.ಜಿ, ಶಾಬೂದ್ದೀನ್ ಬುಕ್ಕದ್ ಸೇರಿದಂತೆ ಹಲವರು ಭಾಗವಹಿಸಿದ್ರು.