ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ವಿಷ ಆಹಾರ ಸೇವನೆ ಮಾಡಿ ಒಂದೇ ಮೂವರು ಸಾವನ್ನಪ್ಪಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ತಿಪ್ಪಾನಾಯ್ಕ(46), ಪತ್ನಿ ಸುಧಾಬಾಯಿ(43) ಹಾಗೂ ವೃದ್ಧೆ ಗುಂಡಿಬಾಯಿ(75) ಮೃತ ದುರ್ದೈವಿಗಳು.
ಇನ್ನು 18 ವರ್ಷದ ರಾಹುಲು ಹಾಗೂ 16 ವರ್ಷದ ರಮ್ಯ ಅಸ್ವಸ್ಥಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಮುದ್ದೆ ಸಂಬಾರು ಸೇವನೆ ಮಾಡಿದ್ದಾರೆ. ಇದಾದ ಬಳಿಕ ಅಸ್ವಸ್ಥಗೊಂಡಿದ್ದರು.
ಐವರನ್ನ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದಾರೆ. ಹೀಗೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರು ಅಸ್ವಸ್ಥಗೊಂಡಿದ್ರಿಂದ ಸಂಬಂಧಿಕರ ನೋವು ಹೇಳತೀರದಾಗಿದೆ.