ಪ್ರಜಾಸ್ತ್ರ ಸುದ್ದಿ
ಗದಗ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ರಾಜಕೀಯ ಪಕ್ಷಗಳ ತಯಾರಿ ಜೋರಾಗಿದೆ. ಬಿಜೆಪಿ, ಜೆಡಿಎಸ್ ನ ನಾಯಕರು ಒಬ್ಬೊಬ್ಬರೆ ಹೊರೆಗೆ ಬರುತ್ತಿದ್ದಾರೆ. ಇದೀಗ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ್ದಾರೆ.
ಕುಂದ್ರಳ್ಳಿ ಗ್ರಾಮದಲ್ಲಿನ ತಮ್ಮ ಮನೆಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ಜಗದೀಶ್ ಶೆಟ್ಟರ್ ಜೊತೆಗೆ ಮಾತನಾಡಿ, ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾನೆ. ಅಕ್ಟೋಬರ್ 10ರಂದು ಅಧಿಕೃತವಾಗಿ ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದ್ದಾರೆ.