ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಜೆಪಿ ವಿರುದ್ಧ ಭರ್ಜರಿ ವಾಗ್ದಾಳಿ ಮುಂದುವರೆಸಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ, ಯಡಿಯೂರಪ್ಪ ಸರ್ಕಾರವನ್ನು ತೆಗೆದವರು ಪೇಶ್ವ ವಂಶಸ್ಥರು ಎಂದು ಹೇಳುವ ಮೂಲಕ ಕೇಂದ್ರ ಸಚಿವ ಜೋಶಿ ಹಾಗೂ ಆರ್ ಎಸ್ಎಸ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಕಷ್ಟಪಟ್ಟು ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ಅವರನ್ನು ಸರಿಯಾಗಿ ನಡೆಸಿಕೊಂಡಿದ್ದಾರಾ ಎಂದಿರುವ ಅವರು, ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಯಡಿಯೂರಪ್ಪನವರನ್ನು ಸಿಎಂ ಮಾಡಲು ಒಪ್ಪಿಕೊಂಡಿದ್ದೇವು. ಆದರೆ, ಪೇಶ್ವೆ ವಂಶಸ್ಥರೆ ಯಡಿಯೂರಪ್ಪ ಸರ್ಕಾರ ಕೆಡವಿದರು ಎಂದು ಟೀಕಾಸ್ತ್ರ ಪ್ರಯೋಗಿಸಿದರು.