ಚುನಾವಣೆ ರಾಜಕೀಯಕ್ಕೆ ಮಾಜಿ ಸಿಎಂ ಮೊಯ್ಲಿ ನಿವೃತ್ತಿ

96

ಪ್ರಜಾಸ್ತ್ರ ಸುದ್ದಿ

ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ವೀರಪ್ಪ ಮೊಹ್ಲಿ ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಿವೃತ್ತಿ ಘೋಷಿಸಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ ಸೂಚಿಸಿದ್ದಾರೆ.

ನಾನು ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ. ಚಿಕ್ಕಬಳ್ಳಾಪುರ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ ನೀಡುತ್ತಿದ್ದೇನೆ ಎಂದರು. ಬಿಜೆಪಿ ಅಭ್ಯರ್ಥಿಯಾಗಿ ಕೆ.ಸುಧಾಕರ್ ಕಣದಲ್ಲಿದ್ದಾರೆ.

ವೀರಪ್ಪ ಮೊಯ್ಲಿ ರಾಜಕಾರಣದ ಜೊತೆಗೆ ಲೇಖಕ ಕೂಡ ಆಗಿದ್ದಾರೆ. ಕಾದಂಬರಿ, ಕವನ ಸಂಕಲನ, ನಾಟಕ, ಮಹಾಕಾವ್ಯ ಸಹ ರಚನೆ ಮಾಡಿದ್ದಾರೆ. ಇವರಿಗೆ ಪ್ರತಿಷ್ಠಿತ ಸರಸ್ವತಿ ಸಮ್ಮಾನ ಪ್ರಶಸ್ತಿ ಸಹ ನೀಡಿ ಗೌರವಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!