ಪ್ರಜಾಸ್ತ್ರ ಕ್ರೀಡಾ ಸುದ್ದಿ
ನವದೆಹಲಿ: ಇಂಡಿಯನ್ ಕ್ರಿಕೆಟ್ ಟೀಂನ ಮಾಜಿ ಹಿರಿಯ ಆಟಗಾರ, ಸಚಿವ ಚೇತನ ಚೌಹಾಣ ಮೃತಪಟ್ಟಿದ್ದಾರೆ. ಕರೋನಾ ಸೋಂಕಿನಿಂದ ಬಳಲುತ್ತಿದ್ದ 73 ವರ್ಷದ ಚೇತನ, ಕೃತಕ ಉಸಿರಾಟದ ಮೂಲಕ ಚಿಕಿತ್ಸೆ ನೀಡಲಾಗ್ತಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೇತನ ಚೌಹಾಣ, ಜುಲೈ 12ರಂದು ಸೋಂಕು ತಗುಲಿ, ಲಖನೌದ ಸಂಜಯ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಚೇತರಿಸಿಕೊಂಡಿರ್ಲಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ವೇದಾಂತ ಆಸ್ಪತ್ರೆಗೆ ದಾಖಲಿಸಿದ್ರೂ ಉಪಯೋಗವಾಗಲಿಲ್ಲ. ಚೇತನ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿದ್ರು.