ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಕುಪ್ಪುಸ್ವಾಮಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಇಂದು ಅಧಿಕೃತವಾಗಿ ಅಣ್ಣಾಮಲೈ ಬಿಜೆಪಿ ಸೇರಿದ್ದಾರೆ. ಈ ಮೂಲಕ ಇಷ್ಟು ದಿನಗಳಿಂದ ಕೇಳಿ ಬರ್ತಿದ್ದ ಮಾತು ನಿಜವಾಗಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರುಳಿಧರರಾವ್, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್.ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ತಮಿಳುನಾಡು ಮೂಲದ ಅಣ್ಣಾಮಲೈ 10 ವರ್ಷಗಳ ಕಾಲ ಕರ್ನಾಟದಲ್ಲಿ ಸೇವೆ ಸಲ್ಲಿಸಿದ್ದಾರೆ. 2019ರಲ್ಲಿ ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ರು. ಆಗ್ಲೇ ಅವರು ಬಿಜೆಪಿ ಸೇರಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದ್ವು.
ಬಳಿಕ ಫೇಸ್ ಬುಕ್ ಲೈವ್ ಬಂದ ಅವರು, 2021ರಲ್ಲಿ ತಮಿಳುನಾಡಿನಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವುದಾಗಿ ತಿಳಿಸಿದ್ರು. ಅದು ಇಂದು ಅಧಿಕೃತವಾಗಿದೆ.