ಪ್ರಜಾಸ್ತ್ರ ಸುದ್ದಿ
ಮೈಸೂರು: ವಿಧಾನಸಭೆ ಮಾಜಿ ಸ್ಪೀಕರ್ ಕೃಷ್ಣ ಅವರು ಶುಕ್ರವಾರ ನಿಧನರಾಗಿದ್ದಾರೆ. 80 ವರ್ಷದ ಕೃಷ್ಣ, ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಆದ್ರೆ, ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಮೈಸೂರಿನ ಮನೆಗೆ ಶಿಫ್ಟ್ ಮಾಡಲಾಗಿತ್ತು.
1985, 1994 ಹಾಗೂ 2004ರಲ್ಲಿ ಮೂರು ಶಾಸಕರಾಗಿದ್ರು. 1988ರಲ್ಲಿ ಎಸ್.ಆರ್ ಬೊಮ್ಮಾಯಿ ಸರ್ಕಾರದಲ್ಲಿ ಪಶುಸಂಗೋಪನೆ ಸಚಿವರಾಗಿದ್ರು. 1996ರಲ್ಲಿ ಮಂಡ್ಯದ ಸಂಸದರಾಗಿದ್ರು. ಮುಂದೆ 2006ರಿಂದ 2008ರ ತನಕ ವಿಧಾನಸಭ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ರು.
ಕೆ.ಆರ್ ಪೇಟೆ ಕೃಷ್ಣ ಅವರ ನಿಧನಕ್ಕೆ ನಾಡಿನ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಗ್ರಾಮವಾದ ಕೋತಮಾರನಹಳ್ಳಿಯಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.