ದೇ.ಹಿಪ್ಪರಗಿಯಲ್ಲಿ ರೈತ ಆತ್ಮಹತ್ಯೆ

193

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಸಾಲಬಾಧೆ ತಾಳಲಾರದೆ ರೈತ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಟ್ಟರಕಿ ಗ್ರಾಮದಲ್ಲಿ ನಡೆದಿದೆ. ಶ್ರೀಶೈಲ ಹಲಸಂಗಿ(35) ಮೃತಪಟ್ಟ ದುರ್ದೈವಿ ರೈತ.

ತಾಂಬಾದ ಡಿಸಿಸಿ ಬ್ಯಾಂಕ್, ಪಿಕೆಪಿಎಸ್, ಗ್ರಾಮೀಣ ಬ್ಯಾಂಕಿನಲ್ಲಿ ಸಾಲ ಮಾಡಿದ್ದ. ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!