ಸಿಂದಗಿಯಲ್ಲಿ ರೈತ ಆತ್ಮಹತ್ಯೆ

631

ಸಿಂದಗಿ: ಸಾಲದಿಂದ ಬೇಸತ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ನಡೆದಿದೆ.

60 ವರ್ಷದ ಬಸಪ್ಪ ಮಲ್ಲಪ್ಪ ಕೋಟಾರಗಸ್ತಿ ಅನ್ನೋ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.7 ಎಕರೆ ಜಮೀನು ಹೊಂದಿದ್ದ ರೈತ ಕೆವಿಜಿ ಬ್ಯಾಂಕ್ ನಲ್ಲಿ 4 ಲಕ್ಷ 20 ಸಾವಿರ ರೂಪಾಯಿ ಸಾಲ ಪಡೆದಿದ್ದ. ಇದನ್ನ ತೀರಿಸಲಾಗದೆ ನೇಣಿಗೆ ಶರಣಾಗಿದ್ದಾನೆ.

ಮೃತ ಬಸಪ್ಪನಿಗೆ ಪತ್ನಿ, ಪುತ್ರ ಹಾಗೂ ಮೂವರು ಹೆಣ್ಮಕ್ಕಳಿದ್ದಾರೆ. ಈ ಕುರಿತು ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





Leave a Reply

Your email address will not be published. Required fields are marked *

error: Content is protected !!