ರೈತರ ಸಂಪೂರ್ಣ ಸಾಲ ಮನ್ನಾ ಇಲ್ಲ

439

ಬೆಳಗಾವಿ: ಸಿಎಂ ಬಿ.ಎಸ್ ಯಡಿಯೂರಪ್ಪನವರು ನಾಡಿನ ರೈತರಿಗೆ ಬಿಗ್ ಶಾಕ್ ನೀಡಿದ್ದಾರೆ. ಪ್ರವಾಹದಲ್ಲಿ ಬದುಕು ಕಳೆದುಕೊಂಡಿರುವ ಸಂತ್ರಸ್ತರಿಗೆ ಪರಿಹಾರ ನೀಡಬೇಕಾದ ಹಿನ್ನೆಲೆಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಇಲ್ಲ ಅಂತಾ ಹೇಳಿದ್ದಾರೆ.

ಇಂದಿನ ಹಣಕಾಸಿನ ಪರಿಸ್ಥಿತಿಯಲ್ಲಿ ಪ್ರವಾಹದಂತ ದೊಡ್ಡ ಅನಾಹುತವಾಗಿದೆ. ಆದ್ರಿಂದ ಎಲ್ಲ ಕಾರ್ಯಕ್ರಮಗಳನ್ನ ರದ್ದು ಮಾಡಿ ನೆರೆ ಪರಿಹಾರ ಬದಲಾವಣೆ ಮಾಡುವ ಸ್ಥಿತಿ ಇದೆ. ಹೀಗಾಗಿ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಅಂತಾ ಹೇಳಿದ್ದಾರೆ.

ನಾವು ಹೇಳಿದಂತೆ ಬೆಳೆಗೆ ಹಾಗೂ ಮನೆ ಕಳೆದುಕೊಂಡುವರಿಗೆ ಹೆಚ್ಚು ಪರಿಹಾರ ನೀಡ್ತಿದ್ದೇವೆ. ದೇಶದ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಪರಿಹಾರ ನೀಡಿರುವ ಉದಾಹರಣೆಯಿಲ್ಲ ಎಂದು ಸಿಎಂ ಹೇಳಿದ್ದಾರೆ. ಇದನ್ನ ರೈತರು ಸಹ ಒಲ್ಲದ ಮನಸ್ಸಿನಿಂದ ಒಪ್ಪಿಕೊಳ್ಳಬೇಕಾದ ಸ್ಥಿತಿಯಿದೆ ಎನ್ನಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!