ಪ್ರಜಾಸ್ತ್ರ ಅಪರಾಧ ಸುದ್ದಿ
ಕಾಸರಗೋಡು: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ನಡೆದ ಘಟನೆ ಜಿಲ್ಲೆಯ ಮಂಜೇಶ್ವರ ತಾಲೂಕಿನ ಸುದೆಂಬಳಿ ಗುರುಕುಮೇರಿ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ. ಇದ್ರಿಂದಾಗಿ ಇಡೀ ಊರಿನ ಜನ ಬೆಚ್ಚಿಬಿದ್ದಿದ್ದಾರೆ.
ಮಾನಸಿಕ ಅಸ್ವಸ್ಥನೊಬ್ಬನಿಂದ ಈ ಕೃತ್ಯ ನಡೆದಿದೆ ಎಂದು ಹೇಳಲಾಗ್ತಿದೆ. ಸದಾಶಿವ, ವಿಠ್ಠಲ, ಬಾಬು, ದೇವಕಿ ಎಂಬುವರು ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಮಾನಸಿಕ ಅಸ್ವಸ್ಥ ಉದಾಯ ಎಂಬಾತ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಹೊರಗೆ ಬಂದ ಉದಯನನ್ನ ಸ್ಥಳೀಯರು ಕಟ್ಟಿ ಹಾಕಿ ಪೊಲೀಸರಿಗೆ ತಿಳಿಸಿದ್ದಾರೆ.
ಮಂಜೇಶ್ವರ ಠಾಣೆ ಪೊಲೀಸ್ರು ಸ್ಥಳಕ್ಕೆ ಆಗಮಿಸಿ, ಮಾನಸಿಕ ಅಸ್ವಸ್ಥನೆಂದು ಹೇಳಲಾಗ್ತಿರುವ ಉದಯನನ್ನ ವಶಕ್ಕೆ ಪಡೆದಿದ್ದಾರೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ. ಏನು ಇದರ ಹಿಂದಿನ ಉದ್ದೇಶ, ಉದಯ ನಿಜಕ್ಕೂ ಮಾನಸಿಕ ಅಸ್ವಸ್ಥನಾ ಅನ್ನೋದರ ತನಿಖೆ ನಡೆಯುತ್ತಿದೆ.