ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ನಡೆಸಿರುವ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಹಾಲಶ್ರೀ ಬಂಧನವಾಗಿದೆ ಎಂದು ಹೇಳಲಾಗುತ್ತಿದೆ. ಒಡಿಶಾದಲ್ಲಿ ಕಟಕ್ ನಲ್ಲಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರಂತೆ.
ಉದ್ಯಮಿ ಗೋವಿಂದು ಬಾಬುಗೆ ಚೈತ್ರಾ ಕುಂದಾಪುರ, ಹಾಲಶ್ರೀ ಸೇರಿ ಗ್ಯಾಂಗ್ ವೊಂದು 5 ಕೋಟಿ ರೂಪಾಯಿ ವಂಚನೆ ನಡೆಸಿದೆ ಎಂದು ದೂರು ದಾಖಲಾಗಿದೆ. ಇದರಲ್ಲಿ ಅಭಿನವ ಹಾಲಶ್ರೀ 3ನೇ ಆರೋಪಿಯಾಗಿದ್ದಾರೆ. ಇವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ.