ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ(ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಇಂದು ಮುಂಜಾನೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೇರಿ ಅನೇಕರು ಚಾಲನೆ ನೀಡಲಿದ್ದಾರೆ.
ಇದಾದ ಬಳಿಕ ಸಿಎಂ, ಡಿಸಿಎಂ, ಸಚಿವರು ಸಾರಿಗೆ ಬಸ್ಸಿನಲ್ಲಿ ಒಂದಿಷ್ಟು ಸಂಚಾರ ಮಾಡಲಿದ್ದಾರೆ. ಮಧ್ಯಾಹ್ನ 1ಗಂಟೆಯಿಂದ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಶುರುವಾಗಲಿದೆ. ರಾಜ್ಯದ ಗಡಿ ತನಕ ವೇಗದೂತ ಸೇರಿ ಸಾಮಾನ್ಯ ಸಾರಿಗೆ ಬಸ್ಸಿನಲ್ಲಿ ಸಂಚರಿಸಬಹುದು. ಐಷಾರಾಮಿ ಬಸ್ಸಗಳಲ್ಲಿ ಉಚಿತ ಇಲ್ಲ.
ಇನ್ನು ಸ್ಮಾರ್ಟ್ ಕಾರ್ಡ್ ಕೊಡುವ ತನಕ ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್ ಸೇರಿದಂತೆ ಕೇಂದ್ರ, ರಾಜ್ಯ ಸರ್ಕಾರದ ಗುರುತಿನ ಚೀಟಿ, ಕೆಲಸ ಮಾಡುತ್ತಿರುವ ಸಂಸ್ಥೆ ನೀಡಿರುವ ಐಡಿ ಕಾರ್ಡ್ ತೋರಿಸಿ ಪ್ರಯಾಣಿಸಬಹುದು.