ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಗೆ ಸಂಜೆ ಚಾಲನೆ

155

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡ ಕಾರ್ಮಿಕರಿಗೆ ಉಚಿತ್ ಬಸ್ ಪಾಸ್ ನೀಡುವ ಯೋಜನೆಗೆ, ಇಂದು ಸಂಜೆ 5ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಕೆಎಸ್ಆರ್ ಟಿಸಿ, ವಾಯುವ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ನಿಗಮಗಳ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಇದರ ಮಾನ್ಯತಾ ಅವಧಿ ಮೂರು ತಿಂಗಳು ಇರಲಿದೆ. ಬಿಬಿಎಂಟಿಸಿಯಿಂದ 30 ಸಾವಿರ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಕಾರ್ಮಿಕರು ತಮ್ಮ ವಾಸ ಸ್ಥಳದಿಂದ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪ್ರಯಾಣ ಮಾಡಬಹುದು.

ಇದೆ ವೇಳೆ ಎಸ್ಎಸ್ಎಲ್ ಸಿಯಲ್ಲಿ 600ಕ್ಕೂ ಹೆಚ್ಚು ಅಂಕಗಳಿಸಿದ ಕಾರ್ಮಿಕರ ಮಕ್ಕಳಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಸಹ ನೀಡಲಾಗುತ್ತಿದೆ. ಈ ಸಾಲಿನಲ್ಲಿ 2,307 ಮಕ್ಕಳು ಪ್ರೋತ್ಸಾಹಧನ ಪಡೆಯುತ್ತಿದ್ದಾರೆ. ಉಚಿತ ಬಸ್ ಪಾಸ್ ಯೋಜನೆಯಿಂದ ವಾರ್ಷಿಕವಾಗಿ 113 ಕೋಟಿ ರೂಪಾಯಿ ವೆಚ್ಚ ಆಗಲಿದ್ದು, ಅದನ್ನು ಮಂಡಳಿ ಭರಿಸಲಿದೆ.




Leave a Reply

Your email address will not be published. Required fields are marked *

error: Content is protected !!