ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇಂದಿನಿಂದ ರಾಜ್ಯ ಸರ್ಕಾರಿ ಬಸ್ ಗಳಲ್ಲಿ ಹಣ್ಮಕ್ಕಳಿಗೆ ಉಚಿತ ಪ್ರಯಾಣ ಜಾರಿಗೆ ಬಂದಿದೆ. ಹೀಗಾಗಿ ರಾಜ್ಯದ ಮಹಿಳೆಯರು ತುಂಬಾ ಖುಷಿಯಲ್ಲಿದ್ದಾರೆ. ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಿದ್ದು, ಉಚಿತ ಬಸ್ ಪ್ರಯಾಣದ ಖುಷಿಯನ್ನು ಮಹಿಳೆಯರು ಅನುಭವಿಸುತ್ತಿದ್ದಾರೆ.
ಬಸ್ ಕಂಡೆಕ್ಟರ್ ಗೆ ಗುರುತಿನ ಚೀಟಿ ತೋರಿಸಿ ಶೂನ್ಯ ದರ ಟಿಕೆಟ್ ಪಡೆದು ಸಂಚಾರ ಮಾಡಿದರು. ಶಕ್ತಿ ಯೋಜನೆಯಿಂದ ಕೋಟ್ಯಾಂತರ ಬಡ, ಮಧ್ಯಮ ವರ್ಗದ ಮಹಿಳೆಯರು ಸೇರಿ ಪ್ರತಿಯೊಬ್ಬರಿಗೂ ಅನುಕೂಲವಾಗಲಿದೆ. ಬರುತ್ತಿದ್ದ ಕಡಿಮೆ ಸಂಬಳದಲ್ಲಿ ಪ್ರತಿ ತಿಂಗಳು ಬಸ್ ಪಾಸಿಗೆ ಹಣ ತೆಗೆದುಕೊಟ್ಟು ಉಳಿದಿದ್ದರಲ್ಲಿ ಜೀವನ ಮಾಡುತ್ತಿದ್ದವರಿಗೆ ಇದು ಒಂದಿಷ್ಟು ಕೈ ಹಿಡಿಯಲಿದೆ ಎಂದು ಮಹಿಳೆಯರು ಬಸ್ಸಿನಲ್ಲಿ ಕುಣಿದು ಕುಪ್ಪಳಿಸುತ್ತಾ ಸಂತಸ ಹಂಚಿಕೊಂಡರು.