ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲಿದೆ ಎಂದು ಕಳೆದ ಕೆಲ ದಿನಗಳಿಂದ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಸಹ ಕೇಳುತ್ತಿದ್ದಾರೆ. ಇದರ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿದ್ದಾರೆ.
ಶಕ್ತಿ ಯೋಜನೆ ನಿಂತು ಹೋಗುತ್ತೆ ಎನ್ನುವುದು ಸುಳ್ಳು. ಇದೆಲ್ಲ ಊಹಾಪೋಹ. ಮಹಿಳೆಯರು ಆತಂಕ ಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ 10 ವರ್ಷಗಳ ಕಾಲ ನಮ್ಮದೆ ಸರ್ಕಾರ ಇರಲಿದೆ. ಆಗಲೂ ಶಕ್ತಿ ಯೋಜನೆ ಮುಂದುವರೆಯುತ್ತೆ ಎಂದಿದ್ದಾರೆ.
ಲೋಕಸಭಾ ಚುನಾವಣೆ ತನಕ ಮಾತ್ರ ಶಕ್ತಿ ಯೋಜನೆ ಇರಲಿದೆ. ಹೀಗಾಗಿ ಮಹಿಳೆಯರು ಪಾಸ್ ಖರೀದಿಸಬೇಕು ಎಂದು ಗುಸುಗುಸ ಮಾತುಗಳು ಕೇಳಿ ಬರುತ್ತಿರುವುದಕ್ಕೆ ಸಾರಿಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಉಚಿತ ಬಸ್ ಪ್ರಯಾಣ ಮುಂದುವರೆಯಲಿದೆ. ಆತಂಕ ಪಡಬೇಕಿಲ್ಲ ಅಂತಾ ತಿಳಿಸಿದ್ದಾರೆ.