ಮೈಸೂರು: ಜೆಎನ್ ಯು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ನಿನ್ನೆ ಸಂಜೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಫ್ರೀ ಕಾಶ್ಮೀರ್ ಅನ್ನೋ ಪೋಸ್ಟರ್ ಕಾಣಿಸಿಕೊಂಡಿದ್ದು ಇದು ವಿವಾದದ ಕಿಡಿ ಹೊತ್ತಿಸಿದೆ.
ವಿವಿ ಸಂಶೋಧನಾ ಸಂಘ, ದಲಿತರ ವಿದ್ಯಾರ್ಥಿ ಒಕ್ಕೂಟ, ಬಹುಜನ ವಿದ್ಯಾರ್ಥಿ ಸಂಘ, ಸ್ಟೂಡೆಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. ವಿಶ್ವವಿದ್ಯಾಲಯದ ಕ್ಯಾಂಪಸ್ ನ ಕ್ಲಾಕ್ ಟವರ್ ನಿಂದ ಕುವೆಂಪು ಪ್ರತಿಮೆವರೆಗೂ ಪಂಜಿನ ಮೆರವಣಿಗೆ ನಡೆಸಲಾಗಿದೆ. ಈ ವೇಳೆ ವಿದ್ಯಾರ್ಥಿಯೊಬ್ಬರು ಫ್ರೀ ಕಾಶ್ಮೀರ್ ಅನ್ನೋ ಬೋರ್ಡ್ ಹಿಡಿದಿರೋದು ವಿವಾದದ ಕಿಡಿ ಹೊತ್ತಿಸಿದೆ.