ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವುದ್ರಿಂದ, ಬಡವರು, ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇವರ ಅನುಕೂಲಕ್ಕಾಗಿ ಮೇ 24ರ ತನಕ ಇಂದಿರಾ ಕ್ಯಾಟಿಂನ್ ನಲ್ಲಿ ಉಚಿತ ತಿಂಡಿ, ಊಟ ನೀಡಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ ಹೇಳಿದ್ದಾರೆ.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಬೆಳಗ್ಗಿನ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿಯ ಊಟವನ್ನ ಉಚಿತವಾಗಿ ನೀಡಲಾಗುವುದು. ಇದರ ವೆಚ್ಚವನ್ನ ಪೌರಾಡಳಿತ ಇಲಾಖೆ ಭರಿಸಲಿದೆ ಎಂದು ತಿಳಿಸಿದ್ದಾರೆ.