ಜ.2ರಂದು ಉಚಿತ ಪಹಣಿ ವಿತರಣೆಗೆ ಚಾಲನೆ

455

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರೈತರ ಮನೆ ಬಾಗಿಲಿಗೆ ಉಚಿತವಾಗಿ ಪಹಣಿ ಹಾಗೂ ಇತರೆ ದಾಖಲೆಗಳನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಈ ಒಂದು ಯೋಜನೆಗೆ ಜನವರಿ 2, 2022ರಂದು ಚಾಲನೆ ನೀಡಲಾಗುವುದು ಅಂತಾ ತಿಳಿಸಿದ್ದಾರೆ.

ಜನವರಿ 2ರಂದು ಈ ಯೋಜನೆಗೆ ಚಾಲನೆ ಸಿಗಲಿದೆ. ಜನವರಿ 26ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದರೊಂದಿಗೆ 45 ಲಕ್ಷ ರೈತರ ಮನೆಗೆ ಪಹಣಿಯನ್ನು ಉಚಿತವಾಗಿ ತಲುಪಿಸಲಾಗುವುದು ಎಂದಿದ್ದಾರೆ.

ಸರಿಯಾದ ದಾಖಲೆ ಇಲ್ಲದ ಪರಿಣಾಮ ಇನಾಂ ಭೂಮಿಗಳಲ್ಲಿ ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿರುವ ರೈತರ ಬ್ಯಾಂಕ್ ಗಳಲ್ಲಿ ಸಾಲ ಸಿಗುತ್ತಿಲ್ಲ. ಹೀಗಾಗಿ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಇದಕ್ಕೆ ಪರಿಹಾರ ಸಿಗಲಿದೆ ಎಂದರು.




Leave a Reply

Your email address will not be published. Required fields are marked *

error: Content is protected !!