ಆಸಿಡ್ ಸಂತ್ರಸ್ತರಿಗೆ ಉಚಿತ ನಿವೇಶನ: ಸಿಎಂ ಬೊಮ್ಮಾಯಿ

283

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟ ಎದುರಿಸುತ್ತಿರುವ ಸಂತ್ರಸ್ತರಿಗೆ ಉಚಿತ ನಿವೇಶನ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ಹಲೋ ಕಂದಾಯ ಸಚಿವರೆ(72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಆಸಿಡ್ ದಾಳಿಗೆ ಒಳಗಾದವರು ಸ್ವಯಂ ಉದ್ಯೋಗ ಕೈಗೊಳ್ಳಲು 5 ಲಕ್ಷ ರೂಪಾಯಿ ನೆರವು, 3 ಸಾವಿರ ಮಾಶಾಸನವನ್ನು 10 ಸಾವಿರಕ್ಕೆ ಏರಿಸಲಾಗಿದ್ದು, ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಶಾಸಕರಾದ ಎಂ.ಕೃಷ್ಣಪ್ಪ, ರಿಜ್ವಾನ್ ಅರ್ಷದ್, ಎಂ.ಪಿ ಕುಮಾರಸ್ವಾಮಿ, ಸಂಸದ ಪಿ.ಸಿ ಮೋಹನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!