ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಮಿಷನ್ ಸಲುವಾಗಿ ಹೊರ ರಾಜ್ಯಗಳಿಂದ ಅಕ್ಕಿ ತರಿಸಲಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿದ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಅಕ್ಕಿ ಸಿಗುವುದಾದರೆ ವಿಜಯೇಂದ್ರ ಅವರೆ ಕೊಡಿಸಲಿ. ಅವರ ಮಿಲ್ ನಲ್ಲಿ ಎಷ್ಟು ಅಕ್ಕಿ ಇದೆ ಅದು ಕೊಡಲಿ. ಬಿಜೆಪಿ ನಾಯಕರು ಬರೀ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕಮಿಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ತರಿಸಲಾಗುತ್ತಿದೆ ಅನ್ನೋದು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.