ಪ್ರಜಾಸ್ತ್ರ ಅಪರಾಧ ಸುದ್ದಿ
ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿ ಕಳೆದ ವಾರ ಹಾಡಹಗಲೇ ಗುಂಡಿನ ದಾಳಿಗೆ ಬಲಿಯಾಗಿದ್ದ ರೌಡಿಶೀಟರ್ ಫ್ರೂಟ್ ಇರ್ಫಾನ್ ಪ್ರಕರಣ ಸಂಬಂಧ ಐವರನ್ನ ಬಂಧಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆದ್ರೆ, ಇಲಾಖೆಯಿಂದ ಅಧಿಕೃತ ಮಾಹಿತಿ ಇನ್ನೂ ಹೊರ ಬಿದ್ದಿಲ್ಲ.
ಕಳೆದ ವಾರ ತನ್ನ ಮಗನ ರಿಸ್ಪೆಶನ್ ನಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಬೈಕ್ ಗಳ ಮೇಲೆ ಬಂದಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿ ಎಸ್ಕೇಪ್ ಆಗಿದ್ರು. ಇರ್ಫಾನನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ.
ಬುಲೆಟ್ ಚಲಾಯಿಸಿದ್ದ ಅಪ್ತಾಬ, ಡಿಯೋ ಚಲಾಯಿಸಿದ್ದ ತೌಸೀಫ, ಅಮೀರ ಸೇರಿದಂತೆ ಐವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತರಿಂದ ಸಜೀವ ಗುಂಡು, ಒಂದು ಕಂಟ್ರಿ ಪಿಸ್ತೂಲ್ ವಶ ಪಡೆಯಲಾಗಿದೆ. ಮುಂಬೈ ಮೂಲದ ಶಾರ್ಪ್ ಶೂಟರ್ ಗಳು ಗುಂಡಿನ ದಾಳಿ ನಡೆಸಿದ್ದು ಎಂದು ಹೇಳಲಾಗಿದ್ದು, ಆದರೆ ಅವರಿನ್ನು ಪೊಲೀಸರ ಕೈಗೆ ಸಿಕ್ಕಿಲ್ಲ ಎಂದು ಹೇಳಲಾಗ್ತಿದೆ.