ಪ್ರಜಾಸ್ತ್ರ ಸುದ್ದಿ
ತುಮಕೂರು: ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದು ಜಿ.ಎನ್ ಬೆಟ್ಟಸ್ವಾಮಿಗೆ ಲಘು ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕಿದಂತೆ ಎದೆ ನೋವು ಕಾಣಿಸಿಕೊಂಡಿದ್ದು, ಲಘು ಹೃದಯಾಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ಟಿಕೆಟ್ ವಂಚಿತ ಅನೇಕರು ಅಸಾಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಆಕ್ರೋಶ ಹೊರ ಹಾಕುತ್ತಿದ್ದಾರೆ. ಕೆಲವರು ಇದರಿಂದ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಜಿ.ಎನ್ ಬೆಟ್ಟಸ್ವಾಮಿ ಅವರ ಆರೋಗ್ಯದ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.