ರಾಜ್ಯಪಾಲರ ವಿರುದ್ಧ ಡಿಸಿಎಂ ಗಂಭೀರ ಆರೋಪ!

389

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ದೋಸ್ತಿ ಸರ್ಕಾರದ ನಾಯಕರಿಗೆ ಹೈಟೆನ್ಷನ್ ಶುರುವಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯ ರಾಜಕೀಯ ಸಾಕಷ್ಟು ಕುತೂಹಲ ಮೂಡಿಸಿದೆ. ಆದ್ರೆ, ಇದೀಗ ಡಿಸಿಎಂ ಡಾ.ಜಿ ಪರಮೇಶ್ವರ ಅವರು ರಾಜ್ಯಪಾಲರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗ್ತಿದೆ.

ಶಾಸಕರ ಸಾಲು ಸಾಲು ರಾಜೀನಾಮೆ ಹಿಂದೆ ರಾಜ್ಯಪಾಲ ವಜುಭಾಯಿ ವಾಲ್ ಅವರಿದ್ದಾರೆ ಅನ್ನೋ ಗಂಭೀರ ಆರೋಪವನ್ನ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಮಾಡಿದ್ದಾರೆ ಅನ್ನೋ ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆ ರಾಜೀನಾಮೆ ಪರ್ವದಲ್ಲಿ ಮತ್ತೊಂದು ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ ಅನ್ನೋ ಮಾತನ್ನ ತೆಗೆದುಹಾಕಲು ಆಗೋದಿಲ್ಲ.




Leave a Reply

Your email address will not be published. Required fields are marked *

error: Content is protected !!