ಬಸವಣ್ಣನ ನೆಲದ ಮಠದಲ್ಲಿಯೇ ಗಾಂಜಾ ಜಪ್ತಿ

293

ಪ್ರಜಾಸ್ತ್ರ ಅಪರಾಧ ಸುದ್ದಿ

ಬಸವನಬಾಗೇವಾಡಿ: ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿರುವ ಮಠವೊಂದರ ಮೇಲೆ ಅಬಕಾರಿ ಇಲಾಖೆ ಪೊಲೀಸರು ದಾಳಿ ಮಾಡಿದ್ದಾರೆ. ಮಠದ ಆವರಣದಲ್ಲಿಯೇ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನ ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಪಟ್ಟಣದ ಯಲ್ಲಾಲಿಂಗ ಮಠದ ಮೇಲೆ ದಾಳಿ ನಡೆಸಿ, ಆವರಣದಲ್ಲಿ ಬೆಳೆಯಲಾಗಿದ್ದ 13 ಹಸಿ ಗಾಂಜಾ ಗಿಡಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇವುಗಳ ಅಂದಾಜು ಮೌಲ್ಯ 1 ಲಕ್ಷ ಎಂದು ಹೇಳಲಾಗ್ತಿದೆ. ಗಾಂಜಾ ಬೆಳೆದ ಆರೋಪಿ ಪರಾರಿಯಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!