ಗಾಂಧಿ ಜಯಂತಿ: ಆಲಮೇಲದಲ್ಲಿ ಬಸ್ ನಿಲ್ದಾಣ ಸ್ವಚ್ಛತೆ

271

ಪ್ರಜಾಸ್ತ್ರ ಸುದ್ದಿ

ಆಲಮೇಲ: ಮಹಾತ್ಮ ಗಾಂಧಿ ಅವರು ಜಯಂತಿ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಲಮೇಲ ಪಟ್ಟಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ಕಾಂಗ್ರೆಸ್ ವತಿಯಿಂದ ಭಾನುವಾರ ಪಟ್ಟಣದಲ್ಲಿನ ಗಾಂಧಿ ವೃತ್ತ, ಬಸ್ ನಿಲ್ದಾಣವನ್ನು ಕಾರ್ಯಕರ್ತರು ಸ್ವಚ್ಛಗೊಳಿಸಿದರು. ಪಕ್ಷದ ಯೂಥ್ ಘಟಕದ ಅಧ್ಯಕ್ಷರು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು, ಪಟ್ಟಣ ಪಂಚಾಯತಿ ಸದಸ್ಯರು, ಪಕ್ಷದ ಸಾಮಾಜಿಕ ಜಾಲತಾಣದ ಅಧ್ಯಕ್ಷರು ಮತ್ತು ಪಕ್ಷದ ಕಾರ್ಯಕರ್ತರು ಸ್ವಚ್ಚತಾ ಅಭಿಯಾನದಲ್ಲಿ ಉಪಸ್ಥಿತಿಯಿದ್ದರು.




Leave a Reply

Your email address will not be published. Required fields are marked *

error: Content is protected !!