ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಆಗ್ರಹಿಸಿ ಪ್ರತಿಭಟನೆ

180

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ರಾಣಿ ಚನ್ನಮ್ಮ ವೃತ್ತದ ಹತ್ತಿರ ಇರುವ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಗುರುವಾರದಿಂದ ಪ್ರತಿಭಟನೆ ನಡೆಸಿದ್ದು, ಇಂದು ಮುಂದುವರೆದಿದೆ. ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಗಸ್ಟ್ 31ರಂದು ಠರಾವು ಪಾಸ್ ಮಾಡಲಾಗಿದೆ. ಆದರೆ, ಆಯುಕ್ತರು ಅನುಮತಿ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!