ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕೋವಿಡ್ 19 ಹಾವಳಿಯಿಂದ ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಪ್ರತಿಷ್ಠಾಪನೆಗೆ ಜಿಲ್ಲೆಯಲ್ಲಿ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಮಾತ್ನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್, ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಬೇಕು. ಒಂದು ವೇಳೆ ಅನುಮತಿ ನೀಡದಿದ್ರೂ ನಾವು ಗಣೇಶೋತ್ಸವ ಮಾಡೇ ಮಾಡ್ತೇವಿ ಎಂದು ಸವಾಲು ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕರೋನಾ ಮಾರ್ಗಸೂಚಿ ಅನ್ವಯ ಗಣೇಶೋತ್ಸವ ಮಾಡುತ್ತೇವೆ. ನಿಯಮಗಳ ಉಲ್ಲಿಂಘಿಸಿದಂತೆ ಸಾರ್ವಜನಿಕ ಗಣೇಶೋತ್ಸವ ಮಾಡುತ್ತೇವೆ. ಬಾರ್ ಸೇರಿದಂತೆ ವಿವಿಧ ಅಂಗಡಿಗಳಿಗೆ ಸರ್ಕಾರ ಅನುಮತಿ ನೀಡಿದೆ. ಆದ್ರೇ, ಗಣೇಶೋತ್ಸವಕ್ಕೆ ಯಾಕೆ ಅನುಮತಿ ಇಲ್ಲ ಎಂದು ಕಿಡಿ ಕಾರಿದ್ರು.