ಪ್ರಜಾಸ್ತ್ರ ಸುದ್ದಿ
ತುಮಕೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಸೌಂಡ್ ನಿಂದಾಗಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಬ್ಬಾಕ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 48 ವರ್ಷದ ವಿರೂಪಾಕ್ಷ ಮೃತ ದುರ್ದೈವಿ.
ಶನಿವಾರ ಸಂಜೆ ಗಣೇಶೋತ್ಸವ ಮೆರವಣಿಗೆ ನಡೆದಿದೆ. ಈ ವೇಳೆ ಭರ್ಜರಿ ಡಿಜೆ ಹಚ್ಚಿದ್ದಾರೆ. ಈ ವೇಳೆ ಎಲ್ಲರೊದಿಗೆ ವಿರೂಪಾಕ್ಷಿಯೂ ಕುಣಿಯುತ್ತಿದ್ದಾನೆ. ಈ ವೇಳೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಬದುಕಲಿಲ್ಲ. ಡಿಜೆ ಸೌಂಡ್ ಅತಿಯಾದ ಪರಿಣಾಮ ಹೃದಯಾಘಾತವಾಗಿದೆ ಎಂದು ಶಂಕಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಪ್ರತಿ ಊರಿನಲ್ಲಿ ಹಬ್ಬದ ಆಚರಣೆ, ಸಭೆ, ಸಮಾರಂಭ, ಮದುವೆ ಮೆರವಣಿಗೆಯಲ್ಲೂ ಅತಿಯಾದ ಡಿಜೆ ಸೌಂಡ್ ಬಳಕೆಯಾಗುತ್ತಿದೆ. ಇದರಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದ್ದರೂ ಪೊಲೀಸ್ ಇಲಾಖೆ ಯಾವುದೆ ಕ್ರಮ ತೆಗೆದುಕೊಳ್ಳದೆ ಕಣ್ಣು, ಕಿವಿ ಮುಚ್ಚಿಕೊಂಡಿದೆ ಎಂದು ಸಾರ್ವನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.