ಪ್ರಜಾಸ್ತ್ರ ಸುದ್ದಿ
ವಿಜಯಪುರ: ಅಕ್ರಮವಾಗಿ ಗಾಂಜಾ ಬೆಳೆದು ಸಂಗ್ರಹ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಲ್ಲೇಶ್ವಿ ಅಚ್ಚೆಗಾಂವಿ, ಶಂಕರಲಿಂಗ ಅಚ್ಚೆಗಾಂವಿ ಬಂಧಿತ ಆರೋಪಿಗಳು ಆಗಿದ್ದಾರೆ.
ಬಂಧಿತರಿಂದ 9,500 ಮೌಲ್ಯದ 950 ಗ್ರಾಮ ಗಾಂಜಾ ಜಪ್ತಿ ಮಾಡಿದ್ದಾರೆ. ಇನ್ನು ಎನ್ ಡಿಪಿಎಸ್ ಕಾಯ್ದೆ ಅಡಿಯಲ್ಲಿ ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗುಮ್ಮಟನಗರಿ ಪೊಲೀಸರು ಭೀರಪ್ಪ ಅನ್ನೋ ಆರೋಪಿಯನ್ನ ಬಂಧಿಸಲಾಗಿದೆ. ವಿಜಯಪುರ ಜಿಲ್ಲೆ ತಾಳಿಕೋಟೆಯ ಶಿವಪೂರ ಗ್ರಾಮದ ನಿವಾಸಿ ಭೀರಪ್ಪ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಲಕ್ಷಾಂತರ ಮೌಲ್ಯದ 900 ಕೆಜಿಯ ಹಸಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.