ಪ್ರಜಾಸ್ತ್ರ ಸಿನಿಮಾ ಡೆಸ್ಕ್
ನಿರ್ದೇಶಕ ಯೋಗರಾಜ್ ಭಟ್ ಹೊಸ ಸಿನಿಮಾ ತಯಾರಿ ನಡೆಸಿದ್ದಾರೆ. ಅವರ ಹೊಸ ಚಿತ್ರಕ್ಕೆ ಗರಡಿ ಎಂದು ಹೆಸರು ಇಡಲಾಗಿದೆ. ಈ ಟೈಟಲ್ ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾನುವಾರ ಬಿಡುಗಡೆಗೊಳಿಸಿದ್ದಾರೆ.
ಯಶಸ್ ಸೂರ್ಯ ಈ ಚಿತ್ರದ ಹೀರೋ. ಕೃಷಿ ಸಚಿವ ಬಿ.ಸಿ ಪಾಟೀಲ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಡಿ ಬಾಸ್ ದರ್ಶನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಭಟ್ಟರ ಜೊತೆಗೆ ದರ್ಶನ್ ವರ್ಕ್ ಮಾಡುತ್ತಿದ್ದಾರೆ.
ಸಾಂಪ್ರದಾಯಿಕವಾಗಿ ಬಂದಿರುವ ವ್ಯಾಯಾಮಶಾಲೆ ಹಾಗೂ ಪಲ್ವಾನ್ ಗಳ ಕುರಿತಾದ ಕಥೆಯನ್ನು ಇದು ಒಳಗೊಂಡಿದೆ. ಹೀಗಾಗಿ ಉತ್ತರ ಕರ್ನಾಟಕದ ಬಾದಾಮಿ, ಐಹೊಳೆ, ಪಟ್ಟದಕಲ್ಲು ಭಾಗದಲ್ಲಿ ಗರಡಿ ಚಿತ್ರದ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗುತ್ತಿದೆ.