ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿಗಳ ಕಚೇರಿಯಿಂದ ಆಯ್ದ ಕೆಲ ಪತ್ರಿಕಾ ಸಂಸ್ಥೆಯ ಮುಖ್ಯಸ್ಥರಿಗೆ, ಸಂಪಾದಕರಿಗೆ, ಪತ್ರಕರ್ತರಿಗೆ ಗಿಫ್ಟ್ ನೀಡಲಾಗಿದೆಯಂತೆ. ಅದರಲ್ಲಿ ಸಿಹಿ ತಿಂಡಿಯ ಜೊತೆಗೆ ಮದ್ಯದ ಬಾಟಲ್, ಬಂಗಾರದ ನಾಣ್ಯ, ಲಕ್ಷಾಂತರ ರೂಪಾಯಿ ಇಡಲಾಗಿದೆ ಅನ್ನೋ ಗಂಭೀರ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಾಕ ಟೀಕೆ ವ್ಯಕ್ತವಾಗಿದೆ. ಅಲ್ಲದೇ ಕಾಂಗ್ರೆಸ್ ನವರು ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉನ್ನತ ತನಿಖೆಗೆ ಆಗ್ರಹಿಸಿದ್ದಾರೆ. ಇನ್ನೊಂದು ಕಡೆ ಇದೊಂದು ಷಡ್ಯಂತ್ರ ಅನ್ನೋ ಮಾತುಗಳು ಕೇಳಿ ಬರುತ್ತಿವೆ.
ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೆ ಹೋಗುತ್ತಿರುವ ಉತ್ತರ ಕರ್ನಾಟಕದವರನ್ನು ತುಳಿಯಬೇಕು ಅನ್ನೋ ಉದ್ದೇಶದಿಂದಲೇ ಈ ರೀತಿ ನಡೆಸಲಾಗುತ್ತಿದೆ ಅನ್ನೋ ಮಾತುಗಳು ಮತ್ತೊಂದು ಕಡೆಯಿಂದ ಕೇಳಿ ಬರುತ್ತಿವೆ. ಶೀಘ್ರದಲ್ಲಿ ಇದರ ಸತ್ಯಾಸತ್ಯತೆ ಹೊರ ಬರಲಿ ಎಂದು ಹೇಳುತ್ತಿದ್ದಾರೆ.