ತಿಂಗಳ ಹಿಂದೆ ಮದ್ವೆಯಾಗಿದ್ದ ಯುವತಿಯ ಅನುಮಾನಸ್ಪದ ಸಾವು

315

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಒಂದು ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಶ್ರೀರಾಂಪುರ ಎಸ್ ಬಿಎಂ ಕಾಲೋನಿಯಲ್ಲಿ ನಡೆದಿದೆ. ಆಶಾರಾಣಿ(28) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಪ್ರದೀಪ ಎಂಬಾತನ ಜೊತೆಗೆ ನಂಜನಗೂಡು ತಾಲೂಕಿನ ಸರಗೂರು ಗ್ರಾಮದ ಆಶಾರಾಣಿಯನ್ನ ಕೊಟ್ಟು ಮದುವೆ ಮಾಡಲಾಗಿತ್ತು. ಮದುವೆ ವೇಳೆ 5 ಲಕ್ಷ ರೂಪಾಯಿ ಹಾಗೂ 130 ಗ್ರಾಂ ಚಿನ್ನದ ವರದಕ್ಷಿಣೆ ನೀಡಲಾಗಿದೆ. ಹೆಚ್ಚಿನ ವರದಕ್ಷಿಣೆಗೆ ಮಗಳನ್ನ ಕೊಲೆ ಮಾಡಲಾಗಿದೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ.

ಈ ಪ್ರಕರಣ ಸಂಬಂಧ ಪತಿ ಪ್ರದೀಪನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!