ಕಲುಷಿತ ನೀರಿನಿಂದ ಬಾಲಕಿ ಸಾವು, 20ಕ್ಕೂ ಹೆಚ್ಚು ಜನರು ಅಸ್ವಸ್ಥ

383

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ: ಕಲುಷಿತ ನೀರು ಸೇವಿಸಿ 4 ಜನರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಈ ಘಟನೆ ಮಾಸುವ ಮುನ್ನವೇ ಬಳ್ಳಾರಿಯಲ್ಲಿ 10 ವರ್ಷದ ಬಾಲಕಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. 10 ವರ್ಷದ ಸುಕನ್ಯಾ ಮೃತ ಬಾಲಕಿಯಾಗಿದ್ದಾಳೆ. ವಾಂತಿ ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಇಂದು ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಳು. ಮತ್ತೆ ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾಳೆ.

ಗ್ರಾಮಕ್ಕೆ ಬಳ್ಳಾರಿ ಡಿಎಚ್ಓ ಜನಾರ್ಧನ್ ಭೇಟಿ ನೀಡಿದ್ದಾರೆ. ಕುಡಿಯುವ ನೀರಿನ ಚರಂಡಿ ನೀರು ಮಿಶ್ರಣಗೊಂಡು ಈ ದುರಂತ ಸಂಭವಿಸಿದೆ ಎಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮೂಲಭೂತ ಸಮಸ್ಯೆಗಳಲ್ಲಿ ಶುದ್ಧ ಕುಡಿಯುವ ನೀರು ಒಂದಾಗಿದ್ದು, ಯಾವ ಸರ್ಕಾರಗಳು ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುತ್ತಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!