ಪ್ರಜಾಸ್ತ್ರ ಅಪರಾಧ ಸುದ್ದಿ
ಪುತ್ತೂರು: ಮನೆಯ ಅಂಗಳದಲ್ಲಿಯೇ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ತಾಲೂಕಿನ ಮುಂಡೂರು ಕಂಪ ಹತ್ತಿರ ನಡೆದಿದೆ. ಜಯಶ್ರೀ ಕೊಲೆಯಾದ ಯುವತಿಯಾಗಿದ್ದಾಳೆ.
ಗುರವಪ್ಪ ಹಾಗೂ ದೇವಕಿ ಅವರ ಪುತ್ರಿಯಾದ ಜಯಶ್ರೀಗೆ ಚಾಕುವಿನಿಂದ ಇರಿಯಲಾಗಿದೆ. ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಲು ಹೊರಟಿದ್ದಾಗ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾಳೆ. ಸಂಪ್ಯ ಠಾಣೆ ಪೊಲೀಸರು ಭೇಟಿ ನೀಡಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಮನೆಯ ಅಂಗಳದಲ್ಲಿಯೇ ಯುವತಿಯನ್ನು ಕೊಲೆ ಮಾಡಿದ್ದು ಯಾರು, ಯಾಕೆ ಅನ್ನೋದರ ಮಾಹಿತಿ ತಿಳಿದು ಬರಬೇಕಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.