ಬಾಲಕಿ ಮೇಲೆ ಅತ್ಯಾಚಾರ ಯತ್ನ: ಭೀಕರ ಕೊಲೆ

548

ಪ್ರಜಾಸ್ತ್ರ ಅಪರಾಧ ಸುದ್ದಿ

ಮಂಡ್ಯ: ದೇಶದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗ್ತಿವೆ. ಕಾಮಕರಿಗೆ ಕಾನೂನಿನ ಬಿಸಿ ಜೋರಾಗಿ ತಟ್ಟದ ಪರಿಣಾಮ ಕ್ರೌರ್ಯ ಹೆಚ್ಚುತ್ತಲೇ ಇದೆ. ಹೀಗಾಗಿ ಕಾಮುಕರ ಪಾಲಿಗೆ ಮಕ್ಕಳು ಸಹ ಬಲಿಯಾಗ್ತಿವೆ. ಸಕ್ಕರೆ ನಾಡಿನಲ್ಲಿ 12 ವರ್ಷದ ಬಾಲಕಿ ಇದಕ್ಕೆ ಬಲಿಯಾಗಿದ್ದಾಳೆ.

ಮದ್ದೂರು ತಾಲೂಕಿನ ಗ್ರಾಮವೊಂದರಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಬಾಲಕಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಗ್ರಾಮದ ಓರ್ವನನ್ನ ಬಂಧಿಸಿದ್ದಾರೆ. ಕೊಪ್ಪ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಕಬ್ಬು ಕಟಾವು ಮಾಡಲು ಬಳ್ಳಾರಿಯಿಂದ ಕುಟುಂಬವೊಂದು ಬಂದಿದೆ. ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ದುಷ್ಕರ್ಮಿಗಳು ಈ ಭಯಾನಕ ಕೃತ್ಯವೆಸಗಿದ್ದಾರೆ. ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.




Leave a Reply

Your email address will not be published. Required fields are marked *

error: Content is protected !!