ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ

270

ಪ್ರಜಾಸ್ತ್ರ ಅಪರಾಧ ಸುದ್ದಿ

ತುಮಕೂರು: ಪ್ರೀತಿಸು ಎಂದು ಯುವತಿ ಹಿಂದೆ ಬಿದ್ದಿದ್ದ ಯುವಕನೊಬ್ಬ ಆಕೆಯನ್ನ ಹತ್ಯೆ ಮಾಡಿದ್ದಾನೆ. ಆತನ ಪ್ರೀತಿ ನಿರಾಕರಿಸಿದ್ದಕ್ಕೆ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ಶಿರಾ ತಾಲೂಕಿನ ದೊಡ್ಡಗುಳ್ಳ ಗ್ರಾಮದಲ್ಲಿ ನಡೆದಿದೆ.

ಪಾಗಲ್ ಪ್ರೇಮಿ ಈರಣ್ಣ ಎಂಬಾತ, ಪಿಯುಸಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ. ಆದ್ರೆ, ಯುವತಿ ನಿರಾಕರಿಸುತ್ತಾ ಬಂದಿದ್ದಾಳೆ. ಬಲವಂತವಾಗಿ ತಾಳಿ ಕಟ್ಟಲು ಬಂದಾಗ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈ ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಕೇಪ್ ಆಗಿರುವ ಕಿರಾತಕ ಈರಣ್ಣನಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!