ಪ್ರಜಾಸ್ತ್ರ ಸುದ್ದಿ
ವಿಜಯಪುರ: ಸೇತುವೆ ಮೇಲಿಂದ ಭೀಮಾ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಜಯಪುರ ಮತ್ತು ಕಲಬುರಗಿ ಮಧ್ಯದ ಗೋಳ್ನೂರನಲ್ಲಿ ಯುವತಿ ಶವ ಪತ್ತೆಯಾಗಿದೆ. 20 ವರ್ಷದ ಐಶ್ವರ್ಯ ಶ್ರೀಪಾಲ ಕಬ್ಬಿನ ಅನ್ನೋ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕುಟುಂಬಸ್ಥರೊಂದಿಗೆ ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೆಯ ದೇವಸ್ಥಾನಕ್ಕೆ ಹೊರಟಿದ್ದ ವೇಳೆ, ನದಿಗೆ ನಾಣ್ಯ ಹಾಕಲು ವಾಹನ ನಿಲ್ಲಿಸಿದಾಗ ದೇವಣಗಾಂವ ಅಫಜಲಪುರ ಮಧ್ಯದ ಸೇತುವೆ ಮೇಲಿಂದ ಯುವತಿ ಹಾರಿದ್ದಾಳೆ. ಯುವತಿ ಐಶ್ವರ್ಯ ಶವ ವಿಜಯಪುರ ಮತ್ತು ಕಲಬುರಗಿ ಮಧ್ಯದ ಗೋಳ್ನೂರನಲ್ಲಿ ಪತ್ತೆಯಾಗಿದೆ.
ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ನಿವಾಸಿಯಾಗಿದ್ದ ಯುವತಿ, ಇಂಡಿ ಪಟ್ಟಣದಲ್ಲಿದ್ದ ಅಕ್ಕನ ಮನೆಗೆ ತಾಯಿಯ ಜೊತೆಗೆ ಬಂದಿದ್ಳು. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ. ಆಲಮೇಲ ಹಾಗೂ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.