ಮನೆಯವರ ವಿರೋಧದ ನಡುವೆ ಮದುವೆಯಾದ ಯವತಿ ಹೆಣವಾದಳು

352

ಪ್ರಜಾಸ್ತ್ರ ಸುದ್ದಿ

ಹಾಸನ: ಕುಟುಂಬಸ್ಥರ ವಿರೋಧದ ನಡುವೆ ಕಳೆದ 5 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 20 ವರ್ಷದ ಪೂಜಾ ಅನ್ನೋ ಯುವತಿ ಸಕಲೇಶಪುರದ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ ಹಾಗೂ ಸಕಲೇಶಪುರದ ಅಶ್ವಥ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದ ಕುಟುಂಬಸ್ಥರು ಇದನ್ನ ವಿರೋಧಿಸಿ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ನೆರವೇರಿಸಲಾಗಿತ್ತು. ಇದಾದ ಸುಮಾರ 20 ದಿನಗಳಲ್ಲಿಯೇ ಯುವತಿ ತಾನು ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಕೊಂಡಿದ್ದಾಳೆ.

ಯುವತಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಸ್ಥಳಕ್ಕೆ ಬಂದಿದ್ದಾರೆ. ಮಗಳ ಸಾವಿಗೆ ಹುಡುಗನ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದಾರೆ. ಇದ್ರಿಂದಾಗಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!